ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿಗೆ 2 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ (2 Lakh Loan Subsidy) ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಈ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ತಾವು ಕೈಗೊಳ್ಳುವ ಸ್ವಯಂ ಉದ್ಯೋಗದ ಘಟಕ ವೆಚ್ಚಕ್ಕೆ ಅನುಗುಣವಾಗಿ ₹2 ಲಕ್ಷವರೆಗೂ ಸಾಲ ಪಡೆಯಬಹುದಾಗಿದೆ. ಈ ಸಾಲಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸಬ್ಸಿಡಿ ಎಷ್ಟು? ಸಾಲ ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಯೋಜನೆಯ ವಿಶೇಷತೆಗಳು
- ಸಾಲ ಮಿತಿ: ₹50,000 ರಿಂದ ₹2,00,000 ವರೆಗೆ
- ಸಹಾಯಧನ (ಸಬ್ಸಿಡಿ): ಗರಿಷ್ಠ ಶೇ.15
- ಬಡ್ಡಿ ದರ: ಶೇ.4 ವಾರ್ಷಿಕ
- ಮರುಪಾವತಿ ಅವಧಿ: 3 ವರ್ಷಗಳು
- ಉದ್ದೇಶ: ಉದ್ಯೋಗ ಸೃಷ್ಟಿಗಾಗಿ ವ್ಯಕ್ತಿಗತವಾಗಿ ಸ್ವಯಂ ಉದ್ಯೋಗ ಆರಂಭಿಸಲು ಉತ್ತೇಜನ ನೀಡುವುದು

ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ವಯೋಮಿತಿ: 18 ರಿಂದ 55 ವರ್ಷಗಳ ವರೆಗೆ
- ಆದಾಯ ಮಿತಿ: ಗ್ರಾಮಾಂತರ ಪ್ರದೇಶವರಿಗೆ ವಾರ್ಷಿಕ ₹98,000 ಒಳಗಿರಬೇಕು ಹಾಗೂ ನಗರ ಪ್ರದೇಶದವರಿಗೆ ವಾರ್ಷಿಕ ₹1,20,000 ಒಳಗೆ ಆದಾಯ ಮಿತಿ ಹೊಂದಿರಬೇಕು.
- ಪ್ರವರ್ಗ: ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ
- ಅನರ್ಹ ಸಮುದಾಯಗಳು: ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ, ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯತ, ಮರಾಠ ಮುಂತಾದವರು
- ಇವರು ಅರ್ಜಿ ಹಾಕುವಂತಿಲ್ಲ: ಈ ಹಿಂದೆ ನಿಗಮದ ಯಾವುದೇ ಯೋಜನೆಯ ಲಾಭ ಪಡೆದುಕೊಂಡವರಿಗೆ ಅರ್ಹತೆ ಇಲ್ಲ
ಅರ್ಜಿ ಸಲ್ಲಿಸುವ ವಿಧಾನ
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗೆ ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್
- ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆ
- ಜಾತಿ ಮತ್ತು ಆದಾಯ ಪ್ರಮಾಣಪತ್ರ (ಅಧಿಕೃತ ಹೆಸರು ಹೊಂದಾಣಿಕೆಯಾಗಿರಬೇಕು)
ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 30-06-2025
ಹೆಚ್ಚಿನ ಮಾಹಿತಿ ಅಥವಾ ಸಹಾಯಕ್ಕಾಗಿ ಸಂಬಂಧಿತ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಸಂಪರ್ಕಿಸಿ…
ಈ ಸೌಲಭ್ಯವು ನಿರುದ್ಯೋಗಿ ಹಿಂದುಳಿದ ವರ್ಗದ ಯುವಕರು ತಮ್ಮದೇ ಉದ್ಯಮ ಆರಂಭಿಸಿ ಸ್ವಾವಲಂಬಿ ಜೀವನವನ್ನಾಳಲು ಪ್ರೇರಣೆ ನೀಡುವಂತೆ ರೂಪುಗೊಂಡಿದೆ. ಸಮಯಮಿತಿಯಲ್ಲಿ ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಿ…
ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳಿಗೆ ಇಲ್ಲಿ ಒತ್ತಿ…