Karnataka Heavy Rain Alert- ರಾಜ್ಯದಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ | ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

Spread the love

ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ ಸಾಧ್ಯತೆ ಇದೆ.

ಜೂನ್ 10ರಿಂದ 11ರ ವರೆಗೆ ಸಾಧಾರಣ ಮಳೆಯಾಗಲಿದೆ. 30-40 ಕಿ.ಮೀ ವೇಗದ ಮಧ್ಯಮ ಗಾಳಿ ಬೀಸಲಿದೆ. ಇನ್ನು ಜೂನ್ 12ರಿಂದ 15ರ ವರೆಗೆ ಭಾರೀ ಮಳೆಯಾಗಲಿದ್ದು; 40-50 ಕಿ.ಮೀ ವೇಗದ ತೀವ್ರಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bagar Hukum Land Rights- ಬಗರ್ ಹುಕುಂ ಸರ್ಕಾರಿ ಭೂಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಬಂಗಾಳಕೊಲ್ಲಿ ಸುಳಿಗಾಳಿ ಪರಿಣಾಮ

ಬಂಗಾಳಕೊಲ್ಲಿಯಲ್ಲಿ ಮೇಲ್ಮಟ್ಟದ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬAದಿದೆ.ಹವಾಮಾನ ಇಲಾಖೆ ಪ್ರಕಾರ, ಈ ಸುಳಿಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ನೈಋತ್ಯ ಮುಂಗಾರು ಚೇತರಿಕೆಗೆ ಇದು ಸಹಕಾರಿಯಾಗಲಿದೆ. ಕರ್ನಾಟಕದ ಒಳನಾಡಿನಲ್ಲಿ ‘ಟ್ರಫ್ ಲೈನ್’ ನಿರ್ಮಾಣವಾಗಿದೆ, ಇದು ಮಳೆ ವ್ಯಾಪ್ತಿ ಹೆಚ್ಚಳಕ್ಕೆ ಕಾರಣವಾಗಿದೆ.

ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ...
Karnataka Heavy Rain Alert June 15 Nairutya Mungaru 2025
ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮುನ್ಸೂಚನೆಗಳು

ಕರಾವಳಿ, ಮಲೆನಾಡು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೆಲವೆಡೆ 100 ಮಿ.ಮೀ ಮೀರಿ ಮಳೆಯಾಗುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯ ನಿರೀಕ್ಷೆ ಇದೆ.

Subsidy Schemes 2025- ಲಿಂಗಾಯತ, ಒಕ್ಕಲಿಗ, ಕುರುಬರಿಗೆ ಭರ್ಜರಿ ಸರ್ಕಾರಿ ಸಬ್ಸಿಡಿ ಯೋಜನೆಗಳು | 2025ನೇ ಸಾಲಿನ ಯೋಜನೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ: ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ಯಾದಗಿರಿ, ಕಲಬುರಗಿ, ಕೊಪ್ಪಳ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತ: ಇನ್ನು ರಾಜಧಾನಿ ಬೆಂಗಳೂರು ನಗರ ಹಾಗೂ ಸುತ್ತಮುತ್ತ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ದಿನದ ಬಳಿಕದ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು-ಮಿಂಚಿನ ಎಚ್ಚರಿಕೆ

ಹವಾಮಾನ ಇಲಾಖೆ ಪ್ರಕಾರ, ಜೂನ್ 12ರಿಂದ ಮಳೆಯ ತೀವ್ರತೆ ಹೆಚ್ಚುವಾಗುವ ನಿರೀಕ್ಷೆಯಿದ್ದು, ಈ ವೇಳೆ ಕೆಲವೆಡೆ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗಬಹುದು. ಜನರು ಈ ಅವಧಿಯಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಮುನ್ನೆಚ್ಚರಿಕೆ ನೀಡಿದೆ.

ಮಳೆ ಮುನ್ಸೂಚನೆಯ ಸತತ ನವೀಕರಣೆಗಾಗಿ ಈ ಪುಟವನ್ನು ಬುಕ್‌ಮಾರ್ಕ್ ಮಾಡಿಕೊಂಡು, ಸ್ಥಳೀಯ ಹವಾಮಾನ ಇಲಾಖೆಯ ಅಧಿಸೂಚನೆಗಳನ್ನು ಗಮನಿಸಿ. ಸುರಕ್ಷಿತವಾಗಿ ಇರಿ, ಮುಂಗಾರು ಸಮರ್ಥವಾಗಿ ನಿಭಾಯಿಸಿ…

Free Solar Electricity- ಮನೆಗೆ ಉಚಿತ ಸೋಲಾರ್ ಕರೆಂಟ್ | ಮನೆಗೆ 20 ವರ್ಷ ಉಚಿತ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ..


Spread the love
WhatsApp Group Join Now
Telegram Group Join Now
error: Content is protected !!