ಎಸ್ಎಸ್ಎಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35,000 ವರೆಗೆ ಪ್ರೋತ್ಸಾಹಧನ (Karnataka Protsahadhana Yojana) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ವಿಶೇಷ ಹಣಕಾಸು ಸಹಾಯ ಯೋಜನೆಯನ್ನು ಜಾರಿಗೆ ತಂದಿದೆ. 2025ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ‘ಪ್ರೋತ್ಸಾಹಧನ ಯೋಜನೆ 2025’ (Prize Money Scholarship 2025) ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊAದಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ.
ಯೋಜನೆಯ ಉದ್ದೇಶ
ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಆರ್ಥಿಕ ಭಾರ ಕಡಿಮೆ ಮಾಡುವ ಮೂಲಕ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ವಿಶಿಷ್ಟವಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಾವಕಾಶ ಕಲ್ಪಿಸಲು ಈ ಯೋಜನೆ ರೂಪಿಸಲಾಗಿದೆ. ಈ ನೆರವು ಅವರಿಗೆ ತಮ್ಮ ಮುಂದಿನ ಅಧ್ಯಯನವನ್ನು ಸುಗಮವಾಗಿ ಮುಂದುವರಿಸಲು ಸಹಾಯ ಮಾಡುತ್ತದೆ.
ಯಾರಿಗೆ ಎಷ್ಟೆಷ್ಟು ಸಹಾಯಧನ ಸಿಗಲಿದೆ?
ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅವರು ಓದುತ್ತಿರುವ ಕೋರ್ಸ್ ಆಧಾರದ ಮೇಲೆ ಈ ಕೆಳಗಿನಂತೆ ಹಣಕಾಸು ಸಹಾಯಧನ ನೀಡಲಾಗುತ್ತದೆ:
- ದ್ವಿತೀಯ ಪಿಯುಸಿ ಅಥವಾ 3 ವರ್ಷದ ಡಿಪ್ಲೋಮಾ: ₹20,000
- ಪದವಿ (Degree BA/BSc/BCom ಇತ್ಯಾದಿ): ₹25,000
- ಸ್ನಾತಕೋತ್ತರ ಪದವಿ (Post-Graduation – MA/MSc/MCom ಇತ್ಯಾದಿ): ₹30,000
- ವೃತ್ತಿಪರ ಹಾಗೂ ತಾಂತ್ರಿಕ ಪದವಿ (Engineering, Medicine, Pharmacy, Agriculture, Law ಇತ್ಯಾದಿ): ₹35,000
ಅರ್ಹತಾ ನಿಯಮಗಳು (Eligibility Criteria)
ಈ ಯೋಜನೆಯ ಪ್ರಯೋಜನ ಪಡೆಯಲು ಅಭ್ಯರ್ಥಿಗಳು ಈ ಅರ್ಹತೆಗಳನ್ನು ಪೂರೈಸಿರಬೇಕು:
- ವಿದ್ಯಾರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು
- 2025ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು
- ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆ ಹೊಂದಿರಬೇಕು

ಅರ್ಜಿ ಸಲ್ಲಿಕೆ ವಿಧಾನ (How to Apply)
ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನಡೆಯುತ್ತದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ಪೋರ್ಟಲ್ಗೆ ಹೋಗಿ ತಮ್ಮ ವಿವರಗಳು ಹಾಗೂ ದಾಖಲೆಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ಕಾಲೇಜಿನ ಹೆಸರು ಪೋರ್ಟಲ್ನಲ್ಲಿ ಕಾಣಿಸದಿದ್ದರೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ಕಚೇರಿಗೆ ಭೇಟಿ ನೀಡಿ ನಿಮ್ಮ ಕಾಲೇಜಿನ ಹೆಸರನ್ನು ಪೋರ್ಟಲ್ನಲ್ಲಿ ಸೇರಿಸಿಕೊಳ್ಳಬೇಕು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್ (UIDAI)
- ಆಧಾರ್ ಲಿಂಕ್ ಆದ ಮೊಬೈಲ್ ಸಂಖ್ಯೆ
- 10ನೇ ತರಗತಿಯ ಅಂಕಪಟ್ಟಿ (SSLC Marks Card)
- ಇತ್ತೀಚಿನ ಶೈಕ್ಷಣಿಕ ಅಂಕಪಟ್ಟಿ (PUC/Degree/PG/Diploma)
- ಜಾತಿ ಪ್ರಮಾಣ ಪತ್ರ (Caste Certificate)
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜಿನ ಎರಡು ಭಾವಚಿತ್ರಗಳು
- ಬ್ಯಾಂಕ್ ಪಾಸ್ಬುಕ್ನ ಮೊದಲ ಪುಟದ ನಕಲು (Account Details ಸಹಿತ)
ಅರ್ಜಿ ಸಲ್ಲಿಸಲು ಹಂತಗಳು
- ಕೆಳಗೆ ನೀಡಿರುವ ಸರ್ಕಾರದ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ.
- ಹೊಸ ಅರ್ಜಿ ನೋಂದಣಿ ಮಾಡಿಕೊಳ್ಳಿ.
- ನಿಮ್ಮ ವೈಯಕ್ತಿಕ ವಿವರಗಳು, ಬ್ಯಾಂಕ್ ವಿವರಗಳು, ಶಿಕ್ಷಣ ವಿವರಗಳು ತುಂಬಿ ಪರಿಶೀಲಿಸಿ.
- ಎಲ್ಲಾ ಅಗತ್ಯ ದಾಖಲೆಗಳ ನಕಲುಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಸಲ್ಲಿಸಿ ಮತ್ತು ಸ್ಲಿಪ್/ರಶೀದಿ ಪಡೆಯಿರಿ.
- ಅರ್ಜಿಯ ಸ್ಥಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಬಹುದು.
ಅರ್ಜಿ ಸಲ್ಲಿಕೆಯು ಸಂಪೂರ್ಣವಾಗಿ ಉಚಿತವಾಗಿದೆ. ತಪ್ಪು ಮಾಹಿತಿ ನೀಡುವುದರಿಂದ ಅರ್ಜಿ ತಿರಸ್ಕೃತವಾಗಬಹುದು. ವಿದ್ಯಾರ್ಥಿಗಳು ಹೆಚ್ಚಿನ ಸಹಾಯಕ್ಕಾಗಿ ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.
ಸರ್ಕಾರದ ಈ ಯೋಜನೆ ನಿಮಗೆ ಅಥವಾ ನಿಮ್ಮ ಗೆಳೆಯರಿಗೆ ಸಹಾಯವಾಗಲಿ! ಹೆಚ್ಚಿನ ವಿದ್ಯಾರ್ಥಿಗಳು ಇದರ ಲಾಭ ಪಡೆಯಲಿ ಎಂದು ಹಾರೈಸುತ್ತೇವೆ.
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.