Ganga Kalyan Swavalambi Sarathi- ರಾಜ್ಯ ಸರ್ಕಾರದಿಂದ ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಸೇರಿದಂತೆ ವಿವಿಧ ಯೋಜನೆ ಸಹಾಯಧನಗಳಿಗೆ ಅರ್ಜಿ ಆಹ್ವಾನ

Spread the love

WhatsApp Group Join Now
Telegram Group Join Now

ರಾಜ್ಯ ಸರ್ಕಾರವು ವಿವಿಧ ನಿಗಮಗಳ ಮೂಲಕ ಕಲ್ಯಾಣ ಯೋಜನೆಗಳಿಗೆ (Ganga Kalyan Swavalambi Sarathi) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಸಾಲಿನಲ್ಲಿ ಹಲವಾರು ಪ್ರಮುಖ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಮೂಲಕ ತಳ ಸಮುದಾಯಗಳ ಜನರಿಗೆ ಸಹಾಯಧನ, ಸಾಲ ಸೌಲಭ್ಯ, ಉದ್ಯೋಗಾವಕಾಶ ಮತ್ತು ಸ್ವಾವಲಂಬನೆಯ ದಾರಿ ತೆರೆದಿಡಲಾಗಿದೆ.

ಭೂ ಒಡೆತನ ಯೋಜನೆ

ಭೂರಹಿತ ಮಹಿಳಾ ಕೃಷಿಕ ಕುಟುಂಬಗಳಿಗೆ ಕೃಷಿ ಜಮೀನು ಒದಗಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಘಟಕ ವೆಚ್ಚ ₹25 ಲಕ್ಷವಾಗಿದ್ದು; ಇದರಲ್ಲಿ ಶೇ.50ರಷ್ಟು ಸರ್ಕಾರದಿಂದ ಸಹಾಯಧನ ಸಿಗಲಿದೆ. ಉಳಿದ ಮೊತ್ತವನ್ನು 6% ಬಡ್ಡಿದರದಲ್ಲಿ ಸಾಲವಾಗಿ ನೀಡಲಾಗುತ್ತದೆ. ಸುಲಭ ಕಂತುಗಳಲ್ಲಿ ಈ ಸಾಲವನ್ನು ಮರುಪಾವತಿ ಮಾಡಬಹುದು.

Karnataka Heavy Rain Alert- ಇನ್ನು 5 ದಿನ ರಾಜ್ಯದಲ್ಲಿ ಜೋರು ಮಳೆ | ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ

ಗಂಗಾ ಕಲ್ಯಾಣ ಯೋಜನೆ

ಈ ಯೋಜನೆಯ ಮೂಲಕ ಸಣ್ಣ ಮತ್ತು ಅತಿಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. 1.20 ರಿಂದ 5 ಎಕರೆ ಜಮೀನು ಹೊಂದಿರುವ ರೈತರಿಗೆ ಕೊಳವೆ ಬಾವಿ ಕೊರೆದು, ಪಂಪ್‌ಸೆಟ್ ಅಳವಡಿಸಿ, ವಿದ್ಯುದೀಕರಣ ಮಾಡಲಾಗುತ್ತದೆ. ಘಟಕ ವೆಚ್ಚ ₹4.75 ಲಕ್ಷ ಅಥವಾ ₹3.75 ಲಕ್ಷ ನೀಡಲಾಗುತ್ತದೆ. ಜೊತೆಗೆ ₹50,000 ಸಾಲ ಕೂಡ ನೀಡಲಾಗುತ್ತದೆ.

ರಾಜ್ಯ ಸರ್ಕಾರವು ವಿವಿಧ ನಿಗಮಗಳ ಮೂಲಕ ಕಲ್ಯಾಣ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ...
Ganga Kalyan Swavalambi Sarathi
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗ)

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿಯಲ್ಲಿ ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ ಹಾಗೂ ಇತರೆ ವ್ಯಾಪಾರ ಉದ್ದೇಶದ ಕಾರ್ಯಗಳಿಗೆ ಸಾಲ, ಸಬ್ಸಿಡಿ ಒದಗಿಸಲಾಗುತ್ತದೆ.

‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಹಾಗೂ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆಯಡಿ ಗರಿಷ್ಠ ₹4 ಲಕ್ಷ ಸಹಾಯಧನ ನೀಡಲಾಗುತ್ತದೆ.

ಅದೇ ರೀತಿ ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ ಅಥವಾ ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಜೊತೆಗೆ ಇತರೆ ವ್ಯಾಪಾರ ಉದ್ದೇಶದ ಕಾರ್ಯಗಳಿಗೆ ಬ್ಯಾಂಕ್ ಮೂಲಕ ಮಂಜೂರಾದ ಸಾಲದ 70% ಅಥವಾ ಗರಿಷ್ಠ ₹2 ಲಕ್ಷ ಸಹಾಯಧನ ನೀಡಲಾಗುತ್ತದೆ.

Karnataka Gruhalakshmi- ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ 2,000 ರೂ ಗೃಹಲಕ್ಷ್ಮಿ ಹಣ ಜಮಾ | ನಿಮ್ಮ ಜಮಾ ವಿವರ ಚೆಕ್ ಮಾಡಿ…

ಸ್ವಯಂ ಉದ್ಯೋಗ ನೇರಸಾಲ ಯೋಜನೆ

ಹಣ್ಣು-ಹಂಪಲು, ಮಳಿಗೆ, ತಳ್ಳುಗಾಡಿ ಮೊದಲಾದ ಸಣ್ಣ ಆರ್ಥಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಘಟಕ ವೆಚ್ಚ ₹1 ಲಕ್ಷವಾಗಿದ್ದು ಇದರಲ್ಲಿ ₹50,000 ಸಹಾಯಧನ + ವಾರ್ಷಿಕ 4% ಬಡ್ಡಿದರದಲ್ಲಿ ₹50,000 ಸಾಲಕ್ಕೆ ನೆರವು ನೀಡಲಾಗುತ್ತದೆ.

ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ

ಮಹಿಳಾ ಸ್ವಸಹಾಯ ಸಂಘಗಳ ಉದ್ಯಮ ಚಟುವಟಿಕೆಗಳಿಗೆ ಬೆಂಬಲ ನೀಡುವುದು ಯೋಜನೆಯ ಉದ್ದೇಶವಾಗಿದೆ. ಕನಿಷ್ಠ 10 ಸದಸ್ಯರ ನೋಂದಾಯಿತ ಮಹಿಳಾ ಸಂಘಕ್ಕೆ ₹2.50 ಲಕ್ಷ (₹1.50 ಲಕ್ಷ ಸಹಾಯಧನ + ₹1 ಲಕ್ಷ ಸಾಲ) ನೀಡಲಾಗುತ್ತದೆ. ಸಾಲಕ್ಕೆ 4% ವಾರ್ಷಿಕ ಸಾಲದ ಬಡ್ಡಿದರವನ್ನು ವಿಧಿಸಲಾಗುತ್ತದೆ.

Bhoo Odetana Yojana- ಜಮೀನು ಖರೀದಿಗೆ 25 ಲಕ್ಷ ರೂ. ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

ಅರ್ಜಿಯನ್ನು ಆಹ್ವಾನಿಸುತ್ತಿರುವ ನಿಗಮಗಳು

ಈ ಯೋಜನೆಗಳನ್ನು ಕೆಳಗಿನ ನಿಗಮಗಳ ಮೂಲಕ ಜಾರಿಗೊಳಿಸಲಾಗುತ್ತದೆ:

  • ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
  • ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
  • ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ
  • ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
  • ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
  • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಅರ್ಜಿ ಸಲ್ಲಿಕೆ ಹೇಗೆ?

ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದ್ದು; ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 10-09-2025
  • ಸಂಪರ್ಕಕ್ಕೆ ಸಹಾಯವಾಣಿ: 94823 00400

Dairy Farming Subsidy- ಹಸು-ಎಮ್ಮೆ ಖರೀದಿಗೆ ₹1.25 ಲಕ್ಷ ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

WhatsApp Group Join Now
Telegram Group Join Now


Spread the love
error: Content is protected !!