ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿವೇತನಗಳಿಗೆ (Sanchi Honnamma and C V Raman Scholarship) ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಶಿಕ್ಷಣವನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ರಾಜ್ಯದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ವಿವಿಧ ರೀತಿಯ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.
ಶಿಕ್ಷಣದಲ್ಲಿ ಸಮಾನತೆಯನ್ನು ತರಲು, ಆರ್ಥಿಕ ಅಡಚಣೆಗಳನ್ನು ನಿವಾರಿಸಲು ಮತ್ತು ಪ್ರತಿಭಾವಂತ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಲು ಸಹಾಯ ಮಾಡುವ ಅನೇಕ ಯೋಜನೆಗಳನ್ನು ಈ ಬಾರಿ ಇಲಾಖೆ ಪ್ರಕಟಿಸಿದೆ.
ಇದನ್ನೂ ಓದಿ: RDCC Bank Recruitment 2025- ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪದವೀಧರರಿಗೆ ಅವಕಾಶ
ಯಾವೆಲ್ಲ ಸ್ಕಾಲರ್ಶಿಪ್ಗಳು?
- ಸಂಚಿ ಹೊನ್ನಮ್ಮ ಪ್ರತಿಭಾ ವಿದ್ಯಾರ್ಥಿವೇತನ
- ಸರ್ ಸಿ.ವಿ. ರಾಮನ್ ವಿದ್ಯಾರ್ಥಿವೇತನ
- ವಿಶೇಷ ಪಾಲನೆ ಮತ್ತು ವಿಶೇಷ ವರ್ಗದ ವಿದ್ಯಾರ್ಥಿವೇತನ
- ಸೈನಿಕ ಸಿಬ್ಬಂದಿ ಮಕ್ಕಳಿಗೆ ಶುಲ್ಕ ಮರುಪಾವತಿ
- ಸರ್ಕಾರಿ ಕಾಲೇಜು ವಿದ್ಯಾರ್ಥಿನಿಯರಿಗೆ ಶುಲ್ಕ ಮರುಪಾವತಿ
1. ಸಂಚಿ ಹೊನ್ನಮ್ಮ ಪ್ರತಿಭಾ ವಿದ್ಯಾರ್ಥಿವೇತನ
ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನವು ಕಲೆ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಯೋಜನೆಯಾಗಿದೆ. ಈ ಯೋಜನೆಯಡಿ ಸಾಮಾಜಿಕ ಮತ್ತು ಆರ್ಥಿಕ ಕಾರಣಗಳಿಂದ ಹಿಂದುಳಿದಿರುವ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ.
ಈ ಯೋಜನೆಯಡಿ ಸಾವಿರಾರು ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ನೇರವಾಗಿ ಸಹಕಾರ ನೀಡಲಾಗುತ್ತಿದೆ. ಸಂಚಿ ಹೊನ್ನಮ್ಮ ಪ್ರತಿಭಾ ವಿದ್ಯಾರ್ಥಿವೇತನವನ್ನು ಕಾಲೇಜು ಶುಲ್ಕದ ಭಾರವನ್ನು ಕಡಿಮೆ ಮಾಡುವುದರೊಂದಿಗೆ ಪಠ್ಯಸಾಮಗ್ರಿ, ಪ್ರಯಾಣ ಮತ್ತು ಇತರ ಶೈಕ್ಷಣಿಕ ವೆಚ್ಚಗಳನ್ನು ನೆರವಾಗುವಂತೆ ನೀಡಲಾಗುತ್ತದೆ.
ಇದನ್ನೂ ಓದಿ: BPL Card Cancellation Check- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ಮೊಬೈಲ್’ನಲ್ಲೇ ಚೆಕ್ ಮಾಡಿ…
2. ಸರ್ ಸಿ.ವಿ. ರಾಮನ್ ವಿದ್ಯಾರ್ಥಿವೇತನ
ವಿಜ್ಞಾನ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸರ್ ಸಿ.ವಿ. ರಾಮನ್ ಅವರ ಹೆಸರಿನಲ್ಲಿ ವಿಶೇಷ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ನವೀನ ಆವಿಷ್ಕಾರಗಳತ್ತ ವಿದ್ಯಾರ್ಥಿನಿಯರನ್ನು ಆಕರ್ಷಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ವೈಜ್ಞಾನಿಕ ಅಧ್ಯಯನ ಕೋರ್ಸ್ಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಗೆ ಇದು ಮಹತ್ವದ ಆರ್ಥಿಕ ಬೆಂಬಲವನ್ನು ಒದಗಿಸುತ್ತದೆ. ದೇಶವನ್ನು ವೈಜ್ಞಾನಿಕವಾಗಿ ಬೆಳೆಯಲು ಮಹಿಳಾ ಪ್ರತಿಭೆಯ ಅಗತ್ಯವನ್ನು ಗುರುತಿಸಿರುವ ಸರ್ಕಾರ, ಈ ವಿದ್ಯಾರ್ಥಿವೇತನ ನೀಡಿ ಉತ್ತಜಿಸುತ್ತಿದೆ.
ಇದನ್ನೂ ಓದಿ: Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
3. ವಿಶೇಷ ಪಾಲನೆ ಮತ್ತು ವಿಶೇಷ ವರ್ಗದ ವಿದ್ಯಾರ್ಥಿವೇತನ
ಸಮಾಜದಲ್ಲಿ ವಿಶೇಷ ಪರಿಚರ್ಯೆ ಅಗತ್ಯವಿರುವ ವಿದ್ಯಾರ್ಥಿಗಳು, ಅಂಗವಿಕಲರು, ನಿರ್ಗತಿಕರು ಮತ್ತು ಅನೇಕ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಕಾಲೇಜು ಶಿಕ್ಷಣವನ್ನು ಕೈಬಿಡಬೇಕಾಗಿರುವ ಅನೇಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವು ಆಧಾರವಾಗುತ್ತಿದೆ.
ಅದೇ ರೀತಿ, ವಿಶೇಷ ಪಾಲಕರಾದ ಏಕಪೋಷಕರು, ಸಂರಕ್ಷಕರು ಅಥವಾ ಕೆಲವೊಂದು ಸಾಮಾಜಿಕ-ಶಾರೀರಿಕ ಸವಾಲುಗಳನ್ನು ಎದುರಿಸುತ್ತಿರುವ ಕುಟುಂಬಗಳ ಮಕ್ಕಳಿಗೂ ಈ ಯೋಜನೆಯ ಅಡಿಯಲ್ಲಿ ಆರ್ಥಿಕ ಸೌಲಭ್ಯ ನೀಡಲಾಗುತ್ತದೆ.

4. ಸೈನಿಕ ಸಿಬ್ಬಂದಿ ಮಕ್ಕಳಿಗೆ ಶುಲ್ಕ ಮರುಪಾವತಿ
ರಾಷ್ಟ್ರ ಸೇವೆಯಲ್ಲಿ ತೊಡಗಿರುವ ಸೈನಿಕರ ಮಕ್ಕಳಿಗೆ ವಿಶೇಷವಾಗಿ ಕಾಲೇಜು ಶುಲ್ಕ ಮರುಪಾವತಿ ಸೌಲಭ್ಯವನ್ನು ನೀಡಲಾಗುತ್ತದೆ. ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕ ಕುಟುಂಬಗಳ ಶೈಕ್ಷಣಿಕ ಭಾರವನ್ನು ಕಡಿಮೆ ಮಾಡುವುದು ಈ ಯೋಜನೆ ಮುಖ್ಯ ಉದ್ದೇಶವಾಗಿದೆ.
ಸೈನಿಕರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ಖಚಿತಪಡಿಸುವ ಹಿನ್ನಲೆಯಲ್ಲಿ ಸೈನಿಕ ಸಿಬ್ಬಂದಿ ಮಕ್ಕಳಿಗೆ ಶುಲ್ಕ ಮರುಪಾವತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಇದು ಸೈನಿಕ ಕುಟುಂಬಗಳಿಗೆ ಮಾನ್ಯತೆ ನೀಡಿ ಅವರ ತ್ಯಾಗವನ್ನು ಗೌರವಿಸುವ ಸರ್ಕಾರದ ಆದರ್ಶ ಕ್ರಮವಾಗಿದೆ.
5. ಸರ್ಕಾರಿ ಕಾಲೇಜು ವಿದ್ಯಾರ್ಥಿನಿಯರಿಗೆ ಶುಲ್ಕ ಮರುಪಾವತಿ
ಇನ್ನು ಸರ್ಕಾರಿ ಕಾಲೇಜುಗಳಿಗೆ ಪ್ರವೇಶ ಪಡೆದಿರುವ ಎಲ್ಲ ವರ್ಗದ ವಿದ್ಯಾರ್ಥಿನಿಯರು ರಾಜ್ಯದ ಅತಿ ದೊಡ್ಡ ಶಿಕ್ಷಣ ಬೆಂಬಲ ಯೋಜನೆಗಳಲ್ಲಿ ಒಂದಾದ ಶುಲ್ಕ ಮರುಪಾವತಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಇದರಿಂದಾಗಿ ಆರ್ಥಿಕ ಸ್ಥಿತಿ ಯಾವುದೇ ಆಗಿದ್ದರೂ ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿನಿಯರು ಸಂಪೂರ್ಣವಾಗಿ ಶುಲ್ಕ ಪರಿಹಾರ ಪಡೆಯಬಹುದು. ಇದು ಉನ್ನತ ಶಿಕ್ಷಣವನ್ನು ಎಲ್ಲರಿಗೂ ಸಮಾನವಾಗಿ ಒದಗಿಸಲು ಸರ್ಕಾರ ಕೈಗೊಂಡಿರುವ ಮಹತ್ವದ ಯೋಜನೆಯಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಈ ಎಲ್ಲಾ ವಿದ್ಯಾರ್ಥಿವೇತನಗಳಿಗೆ ಹಾಗೂ ಶುಲ್ಕ ಮರುಪಾವತಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಹ ವಿದ್ಯಾರ್ಥಿನಿಯರು ಆನ್ಲೈನ್ ಅರ್ಜಿಯನ್ನು ರಾಜ್ಯದ ಎಸ್ಎಸ್ಪಿ (State Scholarship Portal) ವ್ಯವಸ್ಥೆಯ ಮೂಲಕ ಸಲ್ಲಿಸಬೇಕಾಗಿದೆ. ಆನ್ಲೈನ್ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಅತ್ಯಗತ್ಯ.
- ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 15-12-2025
- ಅರ್ಜಿ ಲಿಂಕ್: Apply Now

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.