Dasara Holiday Extension- ಮತ್ತೆ 10 ದಿನ ದಸರಾ ರಜೆ ವಿಸ್ತರಣೆ | ಅಕ್ಟೋಬರ್ 23ರಿಂದ ಶಾಲೆಗಳು ಆರಂಭ

ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿದ್ದು; (Dasara Holiday Extension) ಅಕ್ಟೋಬರ್ 23ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 10 ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು; ದಸರಾ ರಜೆ ಅಕ್ಟೋಬರ್ 18ರ ವರೆಗೂ ಮುಂದುವರೆಯಲಿದೆ. ಅಕ್ಟೋಬರ್ 19ರಿಂದ ನಾಲ್ಕು ದಿನ ದೀಪಾವಳಿ ರಜೆ ಇರಲಿದ್ದು; ಅಕ್ಟೋಬರ್ 23ರಿಂದ ಶಾಲೆಗಳು ಆರಂಭವಾಗಲಿವೆ. ಇದನ್ನೂ ಓದಿ: Railway Recruitment … Read more

Karnataka SSLC PUC Exam Time Table 2026- ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ | ಸಂಪೂರ್ಣ ಮಾಹಿತಿ ಇಲ್ಲಿದೆ…

2026ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿ (Karnataka SSLC PUC Exam Time Table 2026) ಪ್ರಕಟವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದ ತಾತ್ಕಾಲಿತ ವೇಳಾಪಟ್ಟಿಯಂತೆ ಪಿಯುಸಿ 1ನೇ ಪರೀಕ್ಷೆಯು 2026ರ ಫೆಬ್ರವರಿ 28ರಿಂದ ಪ್ರಾರಂಭವಾಗಿ 2026ರ ಮಾರ್ಚ್ 17ರ ವರೆಗೆ ನಡೆಯಲಿವೆ. 2ನೇ ಪರೀಕ್ಷೆಯು ಏಪ್ರಿಲ್ 25ರಿಂದ ಮೇ 9ರ ವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ 1ನೇ ಪರೀಕ್ಷೆಯು … Read more

Deepika Scholarship 2025- ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಪ್ರತೀ ವರ್ಷ 30,000 ರೂ. ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ…

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ (Deepika Scholarship 2025) ವಾರ್ಷಿಕ 30,000 ರೂ. ಸ್ಕಾಲರ್‌ಶಿಪ್ ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅಜೀಂ ಪ್ರೇಮ್ ಜೀ ಫೌಂಡೇಶನ್ (Azim Premji Foundation) ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹೊಸ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ಹೆಣ್ಣು ಮಕ್ಕಳಿಗೆ ಇದೊಂದು ಮಹತ್ವದ ಅವಕಾಶವಾಗಿದೆ. ನಿನ್ನೆ (ಸೆಪ್ಟೆಂಬರ್ 19) ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ … Read more

HDFC Parivartan Scholarship 2025- 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ | ₹15,000 ರಿಂದ ₹75,000 ವರೆಗೆ ಆರ್ಥಿಕ ನೆರವು

2025-26ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ ಸ್ಕಾಲರ್‌ಶಿಪ್’ಗೆ (HDFC Parivartan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅರ್ಹ ವಿದ್ಯಾರ್ಥಿಗಳಿಂದ 2025-26ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ (HDFC Bank Parivartan’s Scholarship) ಸ್ಕಾಲರ್‌ಶಿಪ್’ಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಶೈಕ್ಷಣಿಕ ಸಾಲಿನ 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತ್ತರ ಪದವಿನ ತನಕ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದಾಗಿದೆ. ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ ಮತ್ತು ಸ್ನಾತಕೋತ್ತರ … Read more

Karnataka CET Seat Blocking- ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ ಮಸಲತ್ತು | ಈ ವಿದ್ಯಾರ್ಥಿಗಳಿಗೆ ಕಾದಿದೆ ಗಂಡಾಂತರ

ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ (Karnataka CET Seat Blocking) ಅನುಮಾನ ವ್ಯಕ್ತವಾಗಿದ್ದು; ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಮತ್ತೆ ಸಿಇಟಿ ಸೀಟ್ ಬ್ಲಾಕಿಂಗ್ ಶಂಕೆ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಇತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿಶಾಪವಾಗಿ ಕಾಡುತ್ತ ಬಂದಿದ್ದ ಸೀಟು ಬ್ಲಾಕಿಂಗ್ ಪಿಡುಗಿಗೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಧಿಕಾರವು ಈ ವರ್ಷ ಕಲವು ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಸಾಕಷ್ಟು ತಯಾರಿ … Read more

NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

NMMS ವಿದ್ಯಾರ್ಥಿವೇತನ (NMMS Scholarship 2025) ಪ್ರವೇಶ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು (karnataka school examination and assessment board – kseab) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (National Means Cum-Merit Scholarship-NMMS) ಯೋಜನೆಯಡಿ 9ರಿಂದ 11 ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ವ್ಯಾಸಂಗಕ್ಕೆ ಪ್ರತಿ ವರ್ಷ 12,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. … Read more

Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ ವರೆಗೆ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: Reliance Foundation Scholarships … Read more

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ-2025ಕ್ಕೆ (LIC Golden Jubilee Scholarship Scheme 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ಜೀವ ವಿಮಾ ನಿಗಮ ( Life Insurance Corporation of India- LIC) ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2025ನೇ ಸಾಲಿನ ‘ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ’ಕ್ಕೆ (LIC Golden Jubilee Scholarship 2025) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ವಿದ್ಯಾರ್ಥಿವೇತನದ ಅಡಿಯಲ್ಲಿ 15,000 ರೂ.ದಿಂದ … Read more

Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದವಿ ಮೊದಲ ವರ್ಷದ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುತ್ತ … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more

error: Content is protected !!