Karnataka State Govt Employees DA Hike – ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಶೇ.2ರಷ್ಟು ಡಿಎ ಹೆಚ್ಚಳಕ್ಕೆ ಸರ್ಕಾರದ ಅನುಮೋದನೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ (Karnataka State Govt Employees DA Hike) ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನೊಮೋದನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಡಿಎ ಹೆಚ್ಚಳ ಕುರಿತ ಶುಭಸುದ್ದಿ ಕಡೆಗೂ ಹೊರ ಬಿದ್ದಿದೆ. ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು; ಶೇ.2ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿ ದೊರೆತಿದೆ. ಹಲವಾರು ತಿಂಗಳುಗಳಿಂದ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ … Read more

E-Swathu- ದೀಪಾವಳಿ ನಂತರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ

ಕಡೆಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swathu) ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮಾವಳಿ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swahu) ವಿತರಣೆ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ದೀಪಾವಳಿ ನಂತರ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಂದು ಮನೆ, ನಿವೇಶನ, ವಾಣಿಜ್ಯ ಕಟ್ಟಡಕ್ಕೂ ‘ಇ-ಸ್ವತ್ತು’ ಪ್ರಮಾಣಪತ್ರ ವಿತರಣೆ ಆರಂಭವಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರೂಪಿಸಿರುವ ಹೊಸ ಇ-ಸ್ವತ್ತು … Read more

New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ರಾಜ್ಯ ಸರ್ಕಾರ ಹೇಳೊದೇನು?

ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಅರ್ಜಿ ಆಹ್ವಾನ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್ ವಿತರಣೆ ಯಾವಾಗ? ಎಂಬ ಪ್ರಶ್ನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ… ಕಳೆದ ಎರಡು ವರ್ಷಗಳಿಂದ ಯಾರಿಗೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಿಲ್ಲ. ಕೂಡು ಕುಟುಂಬದಿಂದ ಬೇರೆಯಾದ ಸಾವಿರಾರು ಕುಟುಂಬಗಳು ಹೊಸ ಕಾರ್ಡಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈಚೆಗೆ ವಿಧಾನಸಭೆ ಅಧಿವೇಶನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ದಕ್ಷಿಣ ಭಾರತದಲ್ಲಿಯೇ ರಾಜ್ಯದಲ್ಲಿ ಅತೀ ಹೆಚ್ಚು … Read more

Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…

ಜಾತಿಗಣತಿ ಕಾರ್ಯ ತ್ವರಿತಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸಮೀಕ್ಷೆಗೆ ಅವಕಾಶ ಕಲ್ಪಿಸಿದೆ. ನಾಗರಿಕರು ತಮ್ಮ ಮೊಬೈಲ್’ನಲ್ಲೇ ಸ್ವಯಂ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಾತಿ ಗಣತಿ ಅರ್ಥಾತ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ (Karnataka Social and Educational Survey 2025) ಕಾರ್ಯ ಚುರುಕು ಪಡೆದುಕೊಂಡಿದೆ. ರಾಜ್ಯಾದ್ಯಂತ ಶಿಕ್ಷಕ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಕೆಲವು ತಾಂತ್ರಿಕ ದೋಷದ ಕಾರಣದಿಂದ ಗಣತಿ ಕಾರ್ಯ ನಿಧಾನವಾಗುತ್ತಿದೆ … Read more

Karnataka Old Age Pension- 4,52,451 ಜನರ ವೃದ್ಧಾಪ್ಯ ವೇತನಕ್ಕೆ ಕತ್ತರಿ | ಅನರ್ಹರ ಪತ್ತೆ ಅಭಿಯಾನಕ್ಕೆ ಮುಂದಾದ ಸರ್ಕಾರ

ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಪಿಂಚಣಿ ಯೋಜನೆಗಳು (Karnataka Old Age Pension) ವ್ಯಾಪಕವಾಗಿ ದುರುಪಯೋಗ ಆಗುತ್ತಿದ್ದು; ಸರ್ಕಾರ ಇದೀಗ ಅನರ್ಹರರ ಪತ್ತೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಹಾಗೂ ಅಂಗವಿಕಲರ ಮಾಶಾಸನಗಳನ್ನು ನಿಜವಾದ ಅರ್ಹರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಜಾರಿಗೊಳಿಸಲಾಗಿದೆ. ಆದರೆ, ಈ ಮಹತ್ವದ ಯೋಜನೆಗಳ ದುರುಪಯೋಗ ಮಿತಿ ಮೀರುತ್ತಿದೆ.ಇದಕ್ಕೆ ಕಠಿಣ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ … Read more

Voluntary Retirement- ಸ್ವಯಂ ನಿವೃತ್ತಿ ಪಡೆದ ಸರ್ಕಾರಿ ನೌಕರರಿಗೆ ಭತ್ಯೆ | ಕೇಂದ್ರ ಸಿಬ್ಬಂದಿ ಸಚಿವಾಲಯದ ಮಹತ್ವದ ಮಾಹಿತಿ

ಸ್ವಯಂ ಪ್ರೇರಿತ ನಿವೃತ್ತಿ (Voluntary Retirement) ಪಡೆಯುವ ಸರ್ಕಾರಿ ನೌಕರರಿಗೆ ಭತ್ಯೆ (ಪಿಂಚಣಿ) ಸಿಗಲಿದ್ದು; ಈ ಕುರಿತು ಕೇಂದ್ರ ಸಿಬ್ಬಂದಿ ಸಚಿವಾಲಯವು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ನಿವೃತ್ತಿ ನಂತರ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳು ಜಾರಿಯಲ್ಲಿವೆ. ಇತ್ತೀಚೆಗೆ, ಕೇಂದ್ರ ಸಿಬ್ಬಂದಿ ಸಚಿವಾಲಯವು ನಿವೃತ್ತಿ ಸಂಬಂಧಿತ ಮಹತ್ವದ ಪ್ರಕಟಣೆ ಹೊರಡಿಸಿದ್ದು, ಅದು ವಿಶೇಷವಾಗಿ ಸ್ವಯಂಪ್ರೇರಿತ ನಿವೃತ್ತಿ (VRS) ಆಯ್ಕೆಮಾಡುವ ನೌಕರರಿಗೆ ಹೆಚ್ಚಿನ ನೆರವಾಗಲಿದೆ. VRS ಪಡೆದ ನೌಕರರಿಗೆ ಭತ್ಯೆ … Read more

Karnataka Arogya Sanjeevini Scheme 2025- ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ | ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ

ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ರೂಪಿಸಿರುವ ‘ಆರೋಗ್ಯ ಸಂಜೀವಿನಿ’ (Karnataka Arogya Sanjeevini Scheme 2025) ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿಗೊಳಸಲಾಗುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ‘ಕರ್ನಾಟಕ ಆರೋಗ್ಯ ಸಂಜೀವಿನಿ’ (KASS) ಯೋಜನೆಯನ್ನು ಅಕ್ಟೋಬರ್ 1, 2025ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಈ ಯೋಜನೆಯು ನಗದುರಹಿತ ವೈದ್ಯಕೀಯ … Read more

Karnataka Domestic Workers Salary Law- ಇನ್ಮುಂದೆ ಮನೆ ಕೆಲಸದವರಿಗೂ ಸರ್ಕಾರದಿಂದಲೇ ಸಂಬಳ ಫಿಕ್ಸ್ | ಕಡಿಮೆ ಸಂಬಳ ಕೊಟ್ಟರೆ ಜೈಲು | ರಾಜ್ಯ ಸರ್ಕಾರದ ಹೊಸ ನಿಯಮ

ಇನ್ಮುಂದೆ ಮನೆ ಕೆಲಸದವರಿಗೆ (ಮೇಡ್’ಗಳು) ಸ್ವತಃ ರಾಜ್ಯ ಸರ್ಕಾರವೇ ಸಂಬಳ ಮತ್ತು ಸಮಯವನ್ನು ನಿಗದಿ (Karnataka Domestic Workers Salary Law) ಮಾಡಲಿದೆ. ಜೊತೆಗೆ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಲ್ಯಾಣ ಯೋಜನೆಗಳನ್ನು ಕೂಡ ಅನುಷ್ಠಾನಗೊಳಿಸಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರವು ಇದೀಗ ಮನೆ ಕೆಲಸದವರು, ಚಾಲಕರು ಹಾಗೂ ಸ್ವಚ್ಛತಾಗಾರರ ಕಲ್ಯಾಣಕ್ಕಾಗಿ ‘ಕರ್ನಾಟಕ ಮನೆಗೆಲಸದವರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ-2025’ ಅನ್ನು ರೂಪಿಸಲು ಮುಂದಾಗಿದೆ. … Read more

Karnataka Social Educational Survey 2025- ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಏನೆಲ್ಲಾ ಪ್ರಶ್ನೆ ಕೇಳಲಾಗುತ್ತದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರ ನಾಳೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು ಹದಿನಾರು ದಿನಗಳ ಕಾಲ ಜಾತಿಜನಗಣತಿ (Census) ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 (Karnataka Social and Educational Survey 2025) ನಡೆಸಲಿದೆ… ರಾಜ್ಯದಲ್ಲಿ ವಾಸ ಮಾಡುವ ಎಲ್ಲಾ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ, ಜಾತಿ ಮತ್ತು ಇನ್ನಿತರ ಸುಮಾರು 60 ಮಾಹಿತಿಯ ಜನಗಣತಿಯನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರತಿ ಮನೆಗೂ ಬಂದು ನಿಗದಿಪಡಿಸಿದ ನಮೂನೆಯಲ್ಲಿ ನಿಮ್ಮಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಇದನ್ನೂ … Read more

error: Content is protected !!