HDFC Bank Loan- ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಮೇ 07ರಿಂದ ಕಡಿಮೆ ಬಡ್ಡಿದರದಲ್ಲಿ ಸಾಲ | ಹೊಸ ಬಡ್ಡಿದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ…

ಕಳೆದ ಮೇ 07ರಿಂದ ಅನ್ವಯವಾಗುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank Loan) ತನ್ನ ಸಾಲದ ಬಡ್ಡಿದರದಲ್ಲಿ ಇಳಿಕೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರಮುಖ ಖಾಸಗಿ ಬ್ಯಾಂಕುಗಳಲ್ಲಿ ಒಂದಾದ HDFC ಬ್ಯಾಂಕ್ ತನ್ನ ಸಾಲದ ಮೇಲಿನ ಬಡ್ಡಿದರವನ್ನು ಕಳೆದ ಮೇ 07ರಿಂದ ಕಡಿಮೆ ಮಾಡಿದೆ. MCLR ದರವನ್ನು 0.15% (15 bps) ರಷ್ಟು ಕಡಿಮೆ ಮಾಡಿದ್ದು; ಇದರಿಂದ ಗ್ರಾಹಕರಿಗೆ ಹಲವಾರು ರೀತಿಯ ಲಾಭ ಸಿಗಲಿದೆ. ಆರ್‌ಬಿಐ ರೆಪೋ ದರ ಇಳಿಕೆಯ ಪರಿಣಾಮ ಇತ್ತೀಚೆಗಷ್ಟೇ … Read more

Borewell Permission- ಇನ್ಮುಂದೆ ಬೋರ್‌ವೆಲ್ ಕೊರೆಸಲು ಅನುಮತಿ ಕಡ್ಡಾಯ | ಅನುಮತಿ ಪಡೆಯೋವುದು ಹೇಗೆ? ಎಲ್ಲಿ? ಸಂಪೂರ್ಣ ಮಾಹಿತಿ ಇಲ್ಲಿದೆ…

ಇನ್ಮುಂದೆ ಬೋರ್‌ವೆಲ್ (Borewell Permission) ಕೊರೆಸಲು ಸರ್ಕಾರದ ಅನುಮತಿ ಕಡ್ಡಾಯ. ಹೊಸ ನಿಯಮಗಳು, ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇತ್ತೀಚೆಗೆ ಜಾರಿಯಾದ ಹೊಸ ನೀತಿ ಪ್ರಕಾರ, ಬೋರ್‌ವೆಲ್ ಅಥವಾ ಕೊಳವೆ ಬಾವಿ ಕೊರೆಸಲು ಈಗ ರಾಜ್ಯ ಅಂತರ್ಜಲ ಪ್ರಾಧಿಕಾರದ (Karnataka Ground Water Authority) ಮುಂಚಿತ ಅನುಮತಿ ಕಡ್ಡಾಯವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ತೀವ್ರವಾದ ಅಂತರ್ಜಲ ದುರ್ಬಳಕೆಯಿಂದಾಗಿ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಅಂತರ್ಜಲ ಮಟ್ಟ ಸಮತೋಲನ ಆಯ್ದುಕೊಳ್ಳುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. … Read more

B-Khata Application- ಅನಧಿಕೃತ ಮನೆ, ಸೈಟುಗಳಿಗೆ ಸರ್ಕಾರದಿಂದ ಬಿ-ಖಾತಾ ವಿತರಣೆ ಅವಧಿ ವಿಸ್ತರಣೆ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅಕ್ರಮ ನಿವೇಶನ, ಕಟ್ಟಡಗಳಿಗೆ (Illegal site, Buildings) ಸಕ್ರಮಗೊಳಿಸಲು ಸರ್ಕಾರ ಹಮ್ಮಿಕೊಂಡಿರುವ ಬಿ-ಖಾತಾ (B-Khata) ವಿತರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಾನಗರ ಪಾಲಿಕೆಗಳು, ನಗರಸಭೆ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಲಕ್ಷಾಂತರ ಮನೆ ಮಾಲೀಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಇದೇ ಮೇ 10ಕ್ಕೆ ಗಡುವು ಮುಗಿದ್ದಿದ್ದ ಅನಧಿಕೃತ ನಿವೇಶನ, ಕಟ್ಟಡ, ಮನೆಗಳಿಗೆ ಬಿ-ಖಾತೆ ನೀಡುವ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳು ವಿಸ್ತರಿಸಿದೆ. … Read more

GRT Endowment Scholarship 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಜಿಆರ್‌ಟಿ ಜ್ಯುವೆಲರ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರತಿಷ್ಠಿತ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ (GRT Endowment Scholarship 2025) ಅರ್ಜಿ ಆಹ್ವಾನಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೇ ಬದುಕು ರೂಪಿಸುವ ಶಕ್ತಿಯಾಗಿದೆ. ಆದರೆ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಕಾರಣಕ್ಕೆ ತಮ್ಮ ಕನಸುಗಳನ್ನು ಮುರಿದುಕೊಳ್ಳಬೇಕಾದ ಸ್ಥಿತಿಗೆ ಬರುತ್ತಾರೆ. ಇಂತಹ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ, ಪ್ರಸಿದ್ಧ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಸಂಸ್ಥೆ 2025ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಪಿಯುಸಿ ಪಾಸಾದ … Read more

Karnataka CET 2025 Result- ಕರ್ನಾಟಕ ಸಿಇಟಿ 2025 ಫಲಿತಾಂಶ | ಉನ್ನತ ಶಿಕ್ಷಣ ಸಚಿವರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

ಸಿಇಟಿ ಫಲಿತಾಂಶ (Karnataka CET 2025 Result) ಬಿಡುಗಡೆ ಯಾವಾಗ ಎಂದು ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ, ಫಲಿತಾಂಶ ರಿಸಲ್ಟ್ ಕುರಿತ ಅಪ್‌ಡೇಟ್ ಇಲ್ಲಿದೆ… ರಾಜ್ಯದ ಲಕ್ಷಾಂತರ ಪಿಯುಸಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳ ಪ್ರವೇಶ ಪಡೆಯುವ ಕನಸು ಕಂಡು, ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ UGCET 2025 (ಕರ್ನಾಟಕ ಸಿಇಟಿ) ಪರೀಕ್ಷೆ ಬರೆದಿದ್ದರು. ಇದೀಗ ಅವರ ಈ ನಿರೀಕ್ಷೆಗೆ ಉತ್ತರ ನೀಡುವ ಘಳಿಗೆ ಹತ್ತಿರವಾಗಿದ್ದು, ಫಲಿತಾಂಶ ಪ್ರಕಟಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ದೃಢ ಮಾಹಿತಿ ಲಭ್ಯವಾಗಿದೆ. UGCET (Under … Read more

Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

E-Swattu Circular 2025- ಗ್ರಾಮ ಪಂಚಾಯತಿಯಿಂದ ಇ-ಸ್ವತ್ತು ಇನ್ನಷ್ಟು ಸುಲಭ | ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ

ಗ್ರಾಮ ಪಂಚಾಯತಿಯಲ್ಲಿ ‘ಇ-ಸ್ವತ್ತು’ ಪ್ರಕ್ರಿಯೆ ಇನ್ನೂ ಹೆಚ್ಚು ಸುಗಮವಾಗಲಿದ್ದು; ರಾಜ್ಯ ಸರ್ಕಾರ ಈ ಸಂಬಂಧ ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿವಾಸಿಗಳಿಗೆ ತಮ್ಮ ಮನೆ ಮತ್ತು ನಿವೇಶನಗಳಿಗೆ ಇ-ಸ್ವತ್ತು ಹಕ್ಕುಪತ್ರಗಳನ್ನು ಪಡೆಯುವುದು ಇನ್ನೂ ಸುಲಭವಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ‘ಇ-ಸ್ವತ್ತು’ ತಂತ್ರಾಂಶದ ಬಳಕೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಕ್ರಮಗೊಂಡ … Read more

Gruhalakshmi Pending Payments- ಇದೇ ತಿಂಗಳಲ್ಲೇ ಮೂರು ಕಂತುಗಳ ‘ಗೃಹಲಕ್ಷ್ಮೀ’ ಹಣ ಜಮೆ | ಸರ್ಕಾರದಿಂದ ಹಂತಹಂತವಾಗಿ ಬಿಡುಗಡೆಗೆ ಸಿದ್ಧತೆ

ಇದೇ ಮೇ ತಿಂಗಳಲ್ಲಿ ಮೂರು ಕಂತುಗಳ ‘ಗೃಹಲಕ್ಷ್ಮೀ’ ಬಾಕಿ ಹಣ (Gruhalakshmi Pending Payments) ಜಮೆಯಾಗಲಿದ್ದು; ಹಣಕಾಸು ಇಲಾಖೆಯಿಂದ (Finance Department Karnataka) ಅನುಮೋದನೆ ದೊರೆತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲಿದೆ… ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದಲೇ ಗ್ಯಾರಂಟಿ ಯೋಜನೆಗಳು ಜಾರಿಯಾಗಿದ್ದು; ಈ ಪೈಕಿ ಐದು ಗ್ಯಾರಂಟಿಗಳಲ್ಲಿ ಯೋಜನೆಗಳಲ್ಲಿ ‘ಗೃಹಲಕ್ಷ್ಮೀ ಯೋಜನೆ’ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಮಾಸಿಕ ₹2,000 ಹಣವನ್ನು … Read more

CBSE 10th Results 2025- ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ | ಈ ರೀತಿ ರಿಸಲ್ಟ್ ಚೆಕ್ ಮಾಡಿ

ಕಡೆಗೂ ಸಿಬಿಎಸ್‌ಸಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ರಿಸಲ್ಟ್ ವೀಕ್ಷಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬಹಳ ದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಸಿಬಿಎಸ್‌ಇ 10ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮೇ 13ರ ಇಂದು ಮೊದಲಿಗೆ ಪಿಯುಸಿ ರಿಸಲ್ಟ್, ನಂತರ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು ಹಂತ ಹಂತವಾಗಿ ಪ್ರಕಟಸಿದೆ. ಇದೀಗ ವಿದ್ಯಾರ್ಥಿಗಳು 12ನೇ ಮತ್ತು 10ನೇ ತರಗತಿಯ ಫಲಿತಾಂಶಗಳನ್ನು ಸಿಬಿಎಸ್‌ಇ ಅಧಿಕೃತ ವೆಬ್‌ಸೈಟ್ cbse.gov.inನಲ್ಲಿ ಮುಕ್ತವಾಗಿ ಪರಿಶೀಲಿಸಬಹುದಾಗಿದೆ. … Read more

CBSE 12th Result 2025- ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ | ರಿಸಲ್ಟ್ ಹೀಗೆ ಚೆಕ್ ಮಾಡಿ…

ಬಹುದಿನಗಳಿಂದ ಕಾಯುತ್ತಿದ್ದ ಸಿಬಿಎಸ್‌ಸಿ (CBSE) 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ರಿಸೆಲ್ಟ್ ವೀಕ್ಷಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ರ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರವೇಶಿಸಬಹುದು. ಫೆಬ್ರವರಿ 15ರಿಂದ ಏಪ್ರಿಲ್ 4ರ ವರೆಗೆ ಭಾರತದಾದ್ಯಂತ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸುಮಾರು 44 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಳೆದ ವರ್ಷದ … Read more

error: Content is protected !!