Dr Rajendra Prasad Scholarship 2026: 10ನೇ, 12ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ | ಅರ್ಜಿ ಆಹ್ವಾನ

Spread the love

WhatsApp Group Join Now
Telegram Group Join Now

Dr Rajendra Prasad Scholarship 2026: 10ನೇ ಮತ್ತು 12ನೇ ತರಗತಿ ಪಾಸಾದ ಬಡ ವಿದ್ಯಾರ್ಥಿಗಳಿಗೆ ‘ಡಾ. ರಾಜೇಂದ್ರ ಪ್ರಸಾದ್ ಸ್ಕಾಲರ್‌ಶಿಪ್ 2026-27’ ರಡಿ ₹30,000 ಆರ್ಥಿಕ ನೆರವು. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ…

ಆರ್ಥಿಕ ಸಂಕಷ್ಟದ ಕಾರಣದಿಂದ ಉನ್ನತ ಶಿಕ್ಷಣದ ಕನಸು ಕೈಬಿಡುವ ಪರಿಸ್ಥಿತಿ ಅನೇಕ ವಿದ್ಯಾರ್ಥಿಗಳಲ್ಲಿ ಕಂಡುಬರುತ್ತದೆ. ಇಂತಹ ಪ್ರತಿಭಾವಂತ ಹಾಗೂ ಬಡ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ‘ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಕಾರ್ಯಕ್ರಮ 2026-27’ (Dr. Rajendra Prasad Scholarship Program 2026-27) ಘೋಷಿಸಲಾಗಿದೆ.

ಭಾರತದ ಮೊದಲ ರಾಷ್ಟ್ರಪತಿಗಳಾದ ಡಾ. ರಾಜೇಂದ್ರ ಪ್ರಸಾದ್ ಅವರ ಸ್ಮರಣಾರ್ಥ ಆರಂಭಿಸಲಾಗಿರುವ ಈ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಗರಿಷ್ಠ ₹30,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. 10ನೇ ಹಾಗೂ 12ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Karnataka Monsoon Rain Started: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಯಾರು ಅರ್ಜಿ ಸಲ್ಲಿಸಬಹುದು?

ಈ ವಿದ್ಯಾರ್ಥಿವೇತನವನ್ನು 10ನೇ ತರಗತಿ ಮತ್ತು 12ನೇ ತರಗತಿ ಎರಡು ಪ್ರತ್ಯೇಕ ವಿಭಾಗಗಳಲ್ಲಿ ನೀಡಲಾಗುತ್ತಿದೆ.

10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ

  • 2026ರಲ್ಲಿ SSLC, CBSE, ICSE ಅಥವಾ ಇತರೆ ಮಾನ್ಯತೆ ಪಡೆದ ಮಂಡಳಿಯ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಹಿಂದಿನ ತರಗತಿಯಲ್ಲಿ ಕನಿಷ್ಠ 65% ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ: Gruhalakshmi Hana Bandh: ಈ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ನಿಮಗೆ ಹಣ ಬೇಕಾ? ತಕ್ಷಣ ಈ ಕೆಲಸ ಮಾಡಿ…

12ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ

  • 2025 ಅಥವಾ 2026ರಲ್ಲಿ PUC, CBSE, ISC ಅಥವಾ ಸಮಾನ ವಿದ್ಯಾರ್ಹತೆಯ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನಿಷ್ಠ 65% ಅಂಕಗಳನ್ನು ಪಡೆದಿರಬೇಕು.

ಕುಟುಂಬದ ಆದಾಯ ಮಿತಿ

ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಸೇರಿ ₹8 ಲಕ್ಷಕ್ಕಿಂತ ಕಡಿಮೆ ಇರಬೇಕು.

ಇದನ್ನೂ ಓದಿ: Vruddhapya Vethana Raddu: 15.99 ಲಕ್ಷ ಜನರ ವೃದ್ಧಾಪ್ಯ ವೇತನ ರದ್ದು | ಯಾರೆಲ್ಲ ಪಿಂಚಣಿ ಕ್ಯಾನ್ಸಲ್ ಆಗಿದೆ? ಮಾಹಿತಿ ಇಲ್ಲಿದೆ…

ಯಾರಿಗೆ ಆದ್ಯತೆ?

ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕೆಳಗಿನವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ:

  • ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು
  • ಅಂಗವಿಕಲ ವಿದ್ಯಾರ್ಥಿಗಳು (PwD – Persons with Disabilities)
  • ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು
  • ಕೇಂದ್ರ ಸರ್ಕಾರ ಗುರುತಿಸಿರುವ ಮಹತ್ವಾಕಾಂಕ್ಷೆಯ ಜಿಲ್ಲೆಗಳ (Aspirational Districts) ವಿದ್ಯಾರ್ಥಿಗಳು

ಇದನ್ನೂ ಓದಿ: Karnataka Agriculture Department Jobs: 945 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ತಿಂಗಳಿಗೆ ₹1.34 ಲಕ್ಷದವರೆಗೆ ಸಂಬಳ

Dr Rajendra Prasad Scholarship 2026
Dr Rajendra Prasad Scholarship 2026

ಎಷ್ಟು ವಿದ್ಯಾರ್ಥಿವೇತನ ಸಿಗಲಿದೆ?

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣದ ಅಗತ್ಯತೆ ಹಾಗೂ ಕೋರ್ಸ್ ಶುಲ್ಕದ ಆಧಾರದ ಮೇಲೆ ಗರಿಷ್ಠ ₹30,000 ವರೆಗೆ ಒಂದು ಬಾರಿಯ ಆರ್ಥಿಕ ನೆರವು (One-Time Financial Assistance) ನೀಡಲಾಗುತ್ತದೆ.

ಈ ಹಣವನ್ನು ಕೆಳಗಿನ ಶಿಕ್ಷಣ ವೆಚ್ಚಗಳಿಗೆ ಬಳಸಿಕೊಳ್ಳಬಹುದು:

  • ಕಾಲೇಜು ಅಥವಾ ಸಂಸ್ಥೆಯ ಬೋಧನಾ ಶುಲ್ಕ (Tuition Fee)
  • ಪುಸ್ತಕಗಳು ಮತ್ತು ಅಧ್ಯಯನ ಸಾಮಗ್ರಿಗಳು
  • ಹಾಸ್ಟೆಲ್ ಅಥವಾ ವಸತಿ ವೆಚ್ಚ
  • ಇತರೆ ಶಿಕ್ಷಣ ಸಂಬಂಧಿತ ಖರ್ಚುಗಳು

ಇದನ್ನೂ ಓದಿ: Subsidy Cow Purchase Scheme: ಮಹಿಳೆಯರಿಗೆ ಹಸು ಖರೀದಿಗೆ ₹56,700 ಸಹಾಯಧನ | ಸರ್ಕಾರದಿಂದ ಅರ್ಜಿ ಆಹ್ವಾನ

ಅರ್ಜಿಗೆ ಬೇಕಾಗುವ ದಾಖಲೆಗಳು

ಅರ್ಜಿ ಸಲ್ಲಿಸುವ ಮೊದಲು ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು:

  • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
  • ಆಧಾರ್ ಕಾರ್ಡ್ ಅಥವಾ ಇತರೆ ಗುರುತಿನ ಚೀಟಿ
  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ವಿದ್ಯಾರ್ಥಿಗಳಾದರೆ 12ನೇ ತರಗತಿ ಅಂಕಪಟ್ಟಿ
  • ಪ್ರಸ್ತುತ ವರ್ಷದ ಪ್ರವೇಶಾತಿ ಪುರಾವೆ (Admission Letter / College ID Card)
  • ಕಾಲೇಜು ಅಥವಾ ಶಿಕ್ಷಣ ಸಂಸ್ಥೆಯ ಶುಲ್ಕ ರಶೀದಿ (Fee Receipt)
  • ತಹಶೀಲ್ದಾರ್ ನೀಡಿರುವ ಕುಟುಂಬದ ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಖಾತೆ ವಿವರ (Passbook Front Page ಅಥವಾ Cancelled Cheque)
WhatsApp Group Join Now
Telegram Group Join Now

ಇದನ್ನೂ ಓದಿ: One Family One LPG Connection: ಒಂದು ಕುಟುಂಬಕ್ಕೆ ಒಂದೇ ಗ್ಯಾಸ್ ಸಂಪರ್ಕ | ಜೂನ್ 1ರಿಂದ ಹೊಸ ನಿಯಮ ಜಾರಿ | ಗ್ರಾಹಕರು ತಿಳಿಯಬೇಕಾದ ಸಂಪೂರ್ಣ ಮಾಹಿತಿ

ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ

ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಲಿಂಕ್ ಬಳಸಿಕೊಂಡು ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯ ಹಂತಗಳು:

  1. Dr. Rajendra Prasad Scholarship Program 2026-27 ಆಯ್ಕೆಮಾಡಿ.
  2. ಯೋಜನೆಯ ಕುರಿತು ನೀಡಿರುವ ಸೂಚನೆಗಳನ್ನು ಸಂಪೂರ್ಣವಾಗಿ ಓದಿ.
  3. ಇಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆಯ ಮೂಲಕ ನೋಂದಣಿ (Registration) ಅಥವಾ ಲಾಗಿನ್ ಮಾಡಿ.
  4. Apply Now ಬಟನ್ ಮೇಲೆ ಕ್ಲಿಕ್ ಮಾಡಿ.
  5. ಅರ್ಜಿ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  6. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  7. ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ (Preview)
  8. ಮಾಹಿತಿಯು ಸರಿಯಾಗಿದ್ದರೆ Submit ಬಟನ್ ಒತ್ತಿ ಅರ್ಜಿ ಪೂರ್ಣಗೊಳಿಸಿ.

ಇದನ್ನೂ ಓದಿ: PM Kisan 23rd Installment: ಪಿಎಂ ಕಿಸಾನ್ 23ನೇ ಕಂತಿನ ಹಣ ಬಿಡುಗಡೆ | ಸರ್ಕಾರದಿಂದ ಹೊಸ ಅಪ್ಡೇಟ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

28 ಜೂನ್ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೊನೆಯ ಕ್ಷಣದ ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಲು ವಿದ್ಯಾರ್ಥಿಗಳು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ದಾರಿಯನ್ನು ಸುಗಮಗೊಳಿಸುವ ಉದ್ದೇಶದಿಂದ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. 10ನೇ ಅಥವಾ 12ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಆರ್ಥಿಕ ನೆರವಿನ ಅಗತ್ಯವಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು.

ಅರ್ಜಿ ಲಿಂಕ್: Apply ಮಾಡಿ

PM Surya Ghar Yojana: ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು 78,000 ವರೆಗೆ ಸಹಾಯಧನ | ಅರ್ಜಿ ಆಹ್ವಾನ


Spread the love
error: Content is protected !!