Heavy Rain Red Alert- ಜೂನ್ 18ರ ವರೆಗೆ ಭಾರೀ ಮಳೆ ಮುನ್ಸೂಚನೆ | ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ | ಜಿಲ್ಲಾವಾರು ಮಳೆ ವಿವರ ಇಲಿದೆ…

Spread the love

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಜೂನ್ 18ರ ವರೆಗೂ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಕಟ್ಟೆಚ್ಚರ (Heavy Rain Red Alert) ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರದಿಂದ ಜನಜೀವನದಲ್ಲಿ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಜನ ತತ್ತರಿಸಿ ಹೋಗಿದ್ದಾರೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯ ಕಟ್ಟೆಚ್ಚರಿಕೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಆರ್ಭಟ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಅತಿ ಹೆಚ್ಚು ದಾಖಲಾಗಿದ್ದು, ಕೆಲವು ಪ್ರದೇಶಗಳಲ್ಲಿ 150 ಮಿ.ಮೀ.ಗಿಂತ ಅಧಿಕ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನದಿಗಳು ತುಂಬಿ ಹರಿಯುತ್ತಿದ್ದರೆ, ರಸ್ತೆಗಳು ಜಲಾವೃತಗೊಂಡಿವೆ.

SSLC Exam2 Result- SSLC ಪರೀಕ್ಷೆ-2 ಫಲಿತಾಂಶ ಪ್ರಕಟ | ಮೊಬೈಲ್‌ನಲ್ಲೇ ಚೆಕ್ ಮಾಡಿ…

ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯ ಪ್ರಭಾವದಿಂದ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಜಿಲ್ಲೆಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತಗಳು ಪರಿಸ್ಥಿತಿಯನ್ನು ನೇರವಾಗಿ ಮಾನಿಟರ್ ಮಾಡುತ್ತಿದ್ದು, ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿಯೂ ರಜೆ ವಿಸ್ತರಣೆ ಸಾಧ್ಯತೆ ಇದೆ.

ಜೂನ್ 18ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

ಭಾರತ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಜೂನ್ 18ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿವೆ. ಮಳೆಗಾಲದ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನತೆಗೆ ಬೇಗನೆ ಪ್ರವಾಹ ಪರಿಸ್ಥಿತಿಗೆ ಸಿದ್ಧರಾಗುವ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಜೂನ್ 18ರ ವರೆಗೂ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಕಟ್ಟೆಚ್ಚರ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ...
Heavy Rain Red Alert Karnataka District Wise Warning June 18

Kharif Crop Insurance 2025- 2025-26 ಸಾಲಿನ ಮುಂಗಾರು ಹಂಗಾಮು ಬೆಳೆ ವಿಮೆ | ರೈತರೇ ಈಗಲೇ ಅರ್ಜಿ ಹಾಕಿ…

ಈ ಜಿಲ್ಲೆಗಳಿಗೆ ಭಾರೀ ಎಚ್ಚರಿಕೆಯ ರೆಡ್ ಅಲರ್ಟ್

ಹವಾಮಾನ ಇಲಾಖೆ ಕೆಳಕಂಡ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಇದರರ್ಥ ಈ ಭಾಗಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಹೆಚ್ಚು, ಜೀವ ಹಾನಿ ಅಥವಾ ಆಸ್ತಿ ಹಾನಿಗೆ ಸಾಧ್ಯತೆ ಸಂಭವವಿದ್ದು, ಜನತೆ ಎಚ್ಚರಿಕೆಯಿಂದಿರಲು ಸೂಚಿಸಿದೆ.

  • ದಕ್ಷಿಣ ಕನ್ನಡ
  • ಉಡುಪಿ
  • ಉತ್ತರ ಕನ್ನಡ
  • ಧಾರವಾಡ
  • ಬೆಳಗಾವಿ
  • ಹಾವೇರಿ
  • ಚಿಕ್ಕಮಗಳೂರು
  • ಶಿವಮೊಗ್ಗ
  • ಕೊಡಗು
ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಿಲ್ಲೆಗಳು

ಇನ್ನು ಮಧ್ಯಮ ಮಟ್ಟದ ಮಳೆಯಾಗಲಿರುವ ಈ ಕೆಳಕಂಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಸಾಧಾರಣ ಮಳೆಯಾಗುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

  • ಆರೆಂಜ್ ಅಲರ್ಟ್: ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಹಾಸನ, ಮೈಸೂರು,
  • ಯೆಲ್ಲೋ ಅಲರ್ಟ್: ಕೊಪ್ಪಳ, ರಾಯಚೂರು, ಚಿತ್ರದುರ್ಗ, ವಿಜಯನಗರ

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ ಹೊಸ ಅಪ್ಡೇಟ್ | ವಿದ್ಯಾರ್ಥಿಗಳು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳು ಇಲ್ಲಿವೆ…

ನೆರವು ತುರ್ತು ಹೆಲ್ಪ್ ಲೈನ್ ಸಂಖ್ಯೆ

ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ದಾಖಲಾಗಿದ್ದು, ಕೆಲವೊಂದು ಪ್ರದೇಶಗಳಲ್ಲಿ ಇದುವರೆಗೆ ಇದೇ ವರುಷದ ಗರಿಷ್ಠ ಮಳೆಯ ಪ್ರಮಾಣ ದಾಖಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ರೈತರ ಕೃಷಿ ಭೂಮಿಗಳು ಜಲಾವೃತವಾಗಿರುವುದು, ಬಿತ್ತನೆ ಮಾಡಿದ ಜಮೀನುಗಳು ಹಾನಿಯಾಗಿರುವುದು, ಗ್ರಾಮೀಣ ರಸ್ತೆಗಳು ಹಾನಿಯಾಗಿರುವುದು ಕಂಡು ಬಂದಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದರೂ ಸಹ ಅದು ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡುವ ಮಟ್ಟಕ್ಕೆ ತೀವ್ರವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ತುರ್ತು ಸಂಬಂಧಿತ ಸಿಬ್ಬಂದಿಗಳು 24×7 ಕಾರ್ಯನಿರ್ವಹಿಸುತ್ತಿದ್ದು, NDRF ತಂಡಗಳನ್ನು ಕೂಡ ನಿಯೋಜಿಸಲಾಗಿದೆ. ಜನರು ತಮ್ಮ ಜಿಲ್ಲೆಯ ಕಂಟ್ರೋಲ್ ರೂಂ ಅಥವಾ ತುರ್ತು ಸಂಪರ್ಕ ಸಂಖ್ಯೆಗಳನ್ನು ಬಳಸಿ ತಕ್ಷಣ ಸಹಾಯವನ್ನು ಕೋರಬಹುದು.

Kusum-C Solar Scheme- ರೈತರ ಕೃಷಿ ಪಂಪ್‌ಸೆಟ್’ಗಳಿಗೆ ಇನ್ಮುಂದೆ ಹಗಲಲ್ಲಿ ಕರೆಂಟ್ | ಕುಸುಮ್-ಸಿ ಸೋಲಾರ್ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…


Spread the love
WhatsApp Group Join Now
Telegram Group Join Now
error: Content is protected !!