Karnataka Protsahadhana Yojana- SSLC, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ | ₹35,000 ನೆರವಿಗೆ ಅರ್ಜಿ ಆಹ್ವಾನ

Spread the love

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35,000 ವರೆಗೆ ಪ್ರೋತ್ಸಾಹಧನ (Karnataka Protsahadhana Yojana) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ವಿಶೇಷ ಹಣಕಾಸು ಸಹಾಯ ಯೋಜನೆಯನ್ನು ಜಾರಿಗೆ ತಂದಿದೆ. 2025ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ‘ಪ್ರೋತ್ಸಾಹಧನ ಯೋಜನೆ 2025’ (Prize Money Scholarship 2025) ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊAದಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಯೋಜನೆಯ ಉದ್ದೇಶ

ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಆರ್ಥಿಕ ಭಾರ ಕಡಿಮೆ ಮಾಡುವ ಮೂಲಕ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ವಿಶಿಷ್ಟವಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಾವಕಾಶ ಕಲ್ಪಿಸಲು ಈ ಯೋಜನೆ ರೂಪಿಸಲಾಗಿದೆ. ಈ ನೆರವು ಅವರಿಗೆ ತಮ್ಮ ಮುಂದಿನ ಅಧ್ಯಯನವನ್ನು ಸುಗಮವಾಗಿ ಮುಂದುವರಿಸಲು ಸಹಾಯ ಮಾಡುತ್ತದೆ.

Karnataka PM-Kisan- 7.19 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಬಂದ್ | ನಿಮ್ಮ ಹೆಸರು ಈ ಪಟ್ಟಿಯಲ್ಲಿದೆಯಾ? ತಕ್ಷಣ ಚೆಕ್ ಮಾಡಿ…

ಯಾರಿಗೆ ಎಷ್ಟೆಷ್ಟು ಸಹಾಯಧನ ಸಿಗಲಿದೆ?

ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅವರು ಓದುತ್ತಿರುವ ಕೋರ್ಸ್ ಆಧಾರದ ಮೇಲೆ ಈ ಕೆಳಗಿನಂತೆ ಹಣಕಾಸು ಸಹಾಯಧನ ನೀಡಲಾಗುತ್ತದೆ:

  • ದ್ವಿತೀಯ ಪಿಯುಸಿ ಅಥವಾ 3 ವರ್ಷದ ಡಿಪ್ಲೋಮಾ: ₹20,000
  • ಪದವಿ (Degree BA/BSc/BCom ಇತ್ಯಾದಿ): ₹25,000
  • ಸ್ನಾತಕೋತ್ತರ ಪದವಿ (Post-Graduation – MA/MSc/MCom ಇತ್ಯಾದಿ): ₹30,000
  • ವೃತ್ತಿಪರ ಹಾಗೂ ತಾಂತ್ರಿಕ ಪದವಿ (Engineering, Medicine, Pharmacy, Agriculture, Law ಇತ್ಯಾದಿ): ₹35,000
ಅರ್ಹತಾ ನಿಯಮಗಳು (Eligibility Criteria)

ಈ ಯೋಜನೆಯ ಪ್ರಯೋಜನ ಪಡೆಯಲು ಅಭ್ಯರ್ಥಿಗಳು ಈ ಅರ್ಹತೆಗಳನ್ನು ಪೂರೈಸಿರಬೇಕು:

  • ವಿದ್ಯಾರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು
  • 2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು
  • ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆ ಹೊಂದಿರಬೇಕು
SSLC, PUC, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35,000 ವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ...
Karnataka Protsahadhana Yojana Prize Money Scholarship 2025
ಅರ್ಜಿ ಸಲ್ಲಿಕೆ ವಿಧಾನ (How to Apply)

ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ನಡೆಯುತ್ತದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ಪೋರ್ಟಲ್‌ಗೆ ಹೋಗಿ ತಮ್ಮ ವಿವರಗಳು ಹಾಗೂ ದಾಖಲೆಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ಕಾಲೇಜಿನ ಹೆಸರು ಪೋರ್ಟಲ್‌ನಲ್ಲಿ ಕಾಣಿಸದಿದ್ದರೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ಕಚೇರಿಗೆ ಭೇಟಿ ನೀಡಿ ನಿಮ್ಮ ಕಾಲೇಜಿನ ಹೆಸರನ್ನು ಪೋರ್ಟಲ್‌ನಲ್ಲಿ ಸೇರಿಸಿಕೊಳ್ಳಬೇಕು.

BDA Open Auction 2025- ಕಡಿಮೆ ಬೆಲೆಗೆ ಬಿಡಿಎ ಸೈಟ್ ಮಾರಾಟ | ಆರಂಭಿಕ ಬೆಲೆ ಕೇವಲ ₹5.58 ಲಕ್ಷ ಮಾತ್ರ | ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
  • ಆಧಾರ್ ಕಾರ್ಡ್ (UIDAI)
  • ಆಧಾರ್ ಲಿಂಕ್ ಆದ ಮೊಬೈಲ್ ಸಂಖ್ಯೆ
  • 10ನೇ ತರಗತಿಯ ಅಂಕಪಟ್ಟಿ (SSLC Marks Card)
  • ಇತ್ತೀಚಿನ ಶೈಕ್ಷಣಿಕ ಅಂಕಪಟ್ಟಿ (PUC/Degree/PG/Diploma)
  • ಜಾತಿ ಪ್ರಮಾಣ ಪತ್ರ (Caste Certificate)
  • ಆದಾಯ ಪ್ರಮಾಣ ಪತ್ರ
  • ಪಾಸ್‌ಪೋರ್ಟ್ ಸೈಜಿನ ಎರಡು ಭಾವಚಿತ್ರಗಳು
  • ಬ್ಯಾಂಕ್ ಪಾಸ್‌ಬುಕ್‌ನ ಮೊದಲ ಪುಟದ ನಕಲು (Account Details ಸಹಿತ)

Karnataka Panchamitra- ಗ್ರಾಮ ಪಂಚಾಯತಿ ಸೇವೆಗಳನ್ನು ವಾಟ್ಸಾಪ್‌ನಲ್ಲೇ ಪಡೆಯಿರಿ | ಈ ನಂಬರ್‌ಗೆ ‘ಹಾಯ್’ ಅಂತ ಕಳಿಸಿ…

ಅರ್ಜಿ ಸಲ್ಲಿಸಲು ಹಂತಗಳು
  • ಕೆಳಗೆ ನೀಡಿರುವ ಸರ್ಕಾರದ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ.
  • ಹೊಸ ಅರ್ಜಿ ನೋಂದಣಿ ಮಾಡಿಕೊಳ್ಳಿ.
  • ನಿಮ್ಮ ವೈಯಕ್ತಿಕ ವಿವರಗಳು, ಬ್ಯಾಂಕ್ ವಿವರಗಳು, ಶಿಕ್ಷಣ ವಿವರಗಳು ತುಂಬಿ ಪರಿಶೀಲಿಸಿ.
  • ಎಲ್ಲಾ ಅಗತ್ಯ ದಾಖಲೆಗಳ ನಕಲುಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಸಲ್ಲಿಸಿ ಮತ್ತು ಸ್ಲಿಪ್/ರಶೀದಿ ಪಡೆಯಿರಿ.
  • ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ‍್ಯಾಕ್ ಮಾಡಬಹುದು.

ಅರ್ಜಿ ಸಲ್ಲಿಕೆಯು ಸಂಪೂರ್ಣವಾಗಿ ಉಚಿತವಾಗಿದೆ. ತಪ್ಪು ಮಾಹಿತಿ ನೀಡುವುದರಿಂದ ಅರ್ಜಿ ತಿರಸ್ಕೃತವಾಗಬಹುದು. ವಿದ್ಯಾರ್ಥಿಗಳು ಹೆಚ್ಚಿನ ಸಹಾಯಕ್ಕಾಗಿ ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.

ಸರ್ಕಾರದ ಈ ಯೋಜನೆ ನಿಮಗೆ ಅಥವಾ ನಿಮ್ಮ ಗೆಳೆಯರಿಗೆ ಸಹಾಯವಾಗಲಿ! ಹೆಚ್ಚಿನ ವಿದ್ಯಾರ್ಥಿಗಳು ಇದರ ಲಾಭ ಪಡೆಯಲಿ ಎಂದು ಹಾರೈಸುತ್ತೇವೆ.

ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ

KCET Verification Slip Details- ಕೆಸಿಇಟಿ 2025 ಸೀಟು ಹಂಚಿಕೆ ಪ್ರಕ್ರಿಯೆ ಆರಂಭ | ವೆರಿಫಿಕೇಷನ್ ಸ್ಲಿಪ್ ಬಿಡುಗಡೆ | ಸಂಪೂರ್ಣ ಮಾಹಿತಿ ಇಲ್ಲಿದೆ…


Spread the love
WhatsApp Group Join Now
Telegram Group Join Now
error: Content is protected !!